23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya
error: Content is protected !!