September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜರುಗಿದ ಎಸ್ ಎಲ್ ಬೈರಪ್ಪ ಅವರಿಗೆ ನುಡಿ ನಮನ ಸಲ್ಲಿಸುತ್ತಾ, ಭೈರಪ್ಪ ಅವರ ಕೃತಿಗಳಲ್ಲಿ ಎಲ್ಲವನ್ನೂ ಪ್ರಶ್ನಿಸುವಂತಹ ಮನೋಧಾಡ್ಯತೆ ಕಂಡು ಬರುತ್ತಿದ್ದು ಸಾಮಾಜಿಕ ಸಂಘರ್ಷ, ಇತಿಹಾಸ, ಧರ್ಮ, ಶಿಕ್ಷಣ, ತತ್ವಶಾಸ್ತ್ರ ಮುಂತಾದ ವಿಷಯಗಳು ತಿಳಿದು ಬರುತ್ತದೆ. ಮನುಷ್ಯ ಸಂಬಂಧದ ಆಳಕ್ಕೆ ಇಳಿದು ನೈತಿಕ ಮೌಲ್ಯಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಭೈರಪ್ಪರಂತಹ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

Related posts

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ಛಾಯಾ ಕಲಾ ವೈಭವ ಸಾಂಸ್ಕೃತಿಕ ಸ್ಪರ್ಧೆ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಭಾರಿ ಮಳೆಗೆ ರಸ್ತೆಯ ಬದಿ ಕುಸಿತ: ಕಳೆಂಜ ಗ್ರಾಮಸ್ಥರಿಂದ ತಡೆಗೋಡೆ ನಿರ್ಮಾಣ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!