September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಲೈತ್ ಬೆಂಗಳೂರು ಹಾಗೂ ಐಎಸ್.ಟಿ.ಇ ಸಹಭಾಗಿತ್ವದೊಂದಿಗೆ ” ಎಜು – ಟೆಕ್ – ಲೈಫ್‌ಟೂಲ್ಸ್” ಎಂಬ ವಿಷಯದ ಕುರಿತು ಸೆ. 18 ಮತ್ತು 19 ರಂದು ” ಇನ್ನೋವೇಟ್-ಎ-ಥಾನ್ ” ಎನ್ನುವ ಎರಡು ದಿನದ ಹ್ಯಾಕಥಾನ್ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೆಲ್ತ್ಕೇರ್ ಟೆಕ್ನಾಲಜಿ ನಿರ್ದೇಶಕ ಸುನಿಲ್ ಪುರೋಹಿತ್ ಮಾತನಾಡಿ ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ, ಮತ್ತು ಸೃಜನಾತ್ಮಕ ಆಲೋಚನೆಗಳನ್ನು ಉದ್ಯಮಗಳಾಗಿ ಸ್ಟರ‍್ಟ್ಅಪ್ ಗಳ ಕಡೆಗೆ ಮುಂದುವರೆಯಬೇಕೆಂದು ವಿದ್ಯಾರ್ಥಿಗಳಿಗೆ ಉತ್ತೇಜಿಸಿದರು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಗೇನ್‌ವೆಲ್ ಟೆಕ್ನಾಲಜೀಸ್‌ನ ಪ್ರಮುಖ ಉತ್ಪನ್ನ ಮುಖ್ಯಸ್ಥ ರಾಜೇಶ್ ಹಿರಿಯಣ್ಣ ಅಂತಿಮ ಸುತ್ತಿನ ತೀರ್ಪುಗಾರರಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮತ್ತು ಮಾನವ ಸೃಜನಶೀಲತೆಯ ಸಮನ್ವಯದ ಮಹತ್ವವನ್ನು ಅವರು ವಿವರಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಗೆ ಆದ್ಯತೆ ನೀಡಲು ಮತ್ತು ಸಮಯವನ್ನು ಅರ್ಥಪೂರ್ಣವಾಗಿ ಬಳಸಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ 22 ತಂಡಗಳು ಭಾಗವಹಿಸಿದ್ದವು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅವರು ವಿದ್ಯಾರ್ಥಿಗಳ ಭಾಗವಹಿಸುವಿಕೆ ಮತ್ತು ಆವಿಷ್ಕಾರ ಮನೋಭಾವವನ್ನು ಪ್ರಶಂಸಿದರು. ಸಿವಿಲ್‌ವಿಭಾಗದ ಸಹ ಪ್ರಾದ್ಯಾಪಕರಾದ ವಿನಯ್ ಮತ್ತು ರಾಮಪ್ರಸಾದ್ ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya
error: Content is protected !!