25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸ್ವಯಂಸೇವಕರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಸೆ.25 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ತರಬೇತುದಾರರಾಗಿ ಆಗಮಿಸಿದ ಮಂಗಳೂರಿನ ನ್ಯಾಯವಾದಿ ಮತ್ತು ಪ್ರಥಮ ಚಿಕಿತ್ಸಾ ತರಬೇತುದಾರ ಸಂತೋಷ್ ಪೀಟರ್ ಡಿ’ಸೋಜಾ ಆಗಮಿಸಿ, ಪ್ರಥಮ ಚಿಕಿತ್ಸೆ ಮತ್ತು ಸಿ.ಪಿ.ಆರ್ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸಂತೋಷ್ ವಹಿಸಿಕೊಂಡಿದ್ದರು, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಅನುಶ್ರೀ ಮತ್ತು ಬೋಧಕಿ ಶ್ರೀಮತಿ ಮಾಲತಿ ಸೇರಿದಂತೆ ಪ್ರಥಮ ವರ್ಷದ 60 ಸ್ವಯಂಸೇವಕರು ಈ ತರಬೇತಿಯ ಪ್ರಯೋಜನವನ್ನು ಪಡೆದರು.

Related posts

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya
error: Content is protected !!