37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಹಾಗೂ ಡಿ.ಇಡ್. ಕಾಲೇಜು ಜಂಟಿಯಾಗಿ 2025 ಶೈಕ್ಷಣಿಕ ವರ್ಷದ ಪೌರತ್ವ ತರಬೇತಿ ಶಿಬಿರವನ್ನು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆಯಲ್ಲಿ ಆಯೋಜಿಸಿದ್ದು ಈ ಶಿಬಿರವನ್ನು ಉದ್ಘಾಟಿಸಿದ ಜಗದೀಶ್ ಪ್ರಸಾದ್, ಸಿವಿಲ್ ಇಂಜಿನಿಯರ್ ಇವರು ಮಾತನಾಡಿ “ ಮನುಷ್ಯನು ಬೇರೆ ಬೇರೆ ಸ್ಥರಗಳಲ್ಲಿ ತರಬೇತಿ ಪಡೆಯುತ್ತಾನೆ.

ಇಂತಹ ಪೌರತ್ವ ತರಬೇತಿಗಳು ಮಾನವನ ಜೀವನ ರೂಪಿಸಲು ಸಹಕಾರಿಯಾಗುತ್ತವೆ. ಸಾವಿರ ವಿದ್ಯಾರ್ಥಿಗಳ ಜೀವನ ರೂಪಿಸುವ ಶಕ್ತಿ ನಿಮ್ಮಂತಹ ಶಿಕ್ಷಕರಲ್ಲಿದೆ. ಮಕ್ಕಳ ತಪ್ಪುಗಳನ್ನು ತಿದ್ದಿ ಕಷ್ಟಗಳನ್ನು ಎದುರಿಸಲು ನಗುಮೊಗದಿ ತಿಳಿಹೇಳುವುದು ಕೂಡ ಒಂದು ಕಲೆ ” ಎಂದು ಹೇಳಿದರು.


ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ. ಶಶಿಶೇಖರ ಎನ್ ಕಾಕತ್ಕರ್, ಶೈಕ್ಷಣಿಕ ಸಂಯೋಜಕರು, ಶ್ರೀ ಧ. ಮಂ. ಶಿಕ್ಷಣ ಸಂಸ್ಥೆ, ಉಜಿರೆ ಇವರು ಮಾತನಾಡುತ್ತಾ “ ಭಾವೈಕ್ಯತೆ, ಸಹಬಾಳ್ವೆ, ಕರ್ತವ್ಯ ನಿರ್ವಹಣೆ, ಮಾತುಗಾರಿಕೆ ಮತ್ತು ಹೊಂದಾಣಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಹಾಗೂ ಎಲ್ಲವ ಕಲಿತ ಮಾನವನನ್ನು, ಮಾನವೀಯ ಮೌಲ್ಯಗಳೊಂದಿಗೆ ಬಾಳಲು ಕಲಿಸುವ ಶಿಬಿರಗಳು ಎಲ್ಲರಿಗೂ ಸ್ಫೂರ್ತಿ. ಶಿಕ್ಷಕ ವೃತ್ತಿ ಎನ್ನುವುದು ಪವಿತ್ರವಾದುದು. ಬೋಧನೆ, ಪ್ರೇರಣೆ, ಮೌಲ್ಯಗಳು ಹಾಗೂ ಮಾರ್ಗದರ್ಶನವನ್ನು ನೀಡುವುದು ಶಿಕ್ಷಕನಾದವನ ಆದ್ಯ ಕರ್ತವ್ಯ ” ಎಂದು ಹೇಳಿದರು.


ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಮಂಜು ಆರ್, ರತ್ನಮಾನಸದ ನಿಲಯಪಾಲಕರಾದ ಯತೀಶ್ ಕೆ ಬಳಂಜ ಅವರು ಶಿಬಿರಕ್ಕೆ ಶುಭ ಹಾರೈಸಿದರು. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ, ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿ ರಂಝಿಯಾ ಬಾನು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವೀಕ್ಷಾದೀಪ ಸ್ವಾಗತಿಸಿ, ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ವಂದಿಸಿ, ವರ್ಷಾ ಅತಿಥಿ ಪರಿಚಯಿಸಿದರು. ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ರಶ್ಮಿ ಕೆ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!