25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಹಾಗೂ ಡಿ.ಇಡ್. ಕಾಲೇಜು ಜಂಟಿಯಾಗಿ 2025 ಶೈಕ್ಷಣಿಕ ವರ್ಷದ ಪೌರತ್ವ ತರಬೇತಿ ಶಿಬಿರವನ್ನು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆಯಲ್ಲಿ ಆಯೋಜಿಸಿದ್ದು ಈ ಶಿಬಿರವನ್ನು ಉದ್ಘಾಟಿಸಿದ ಜಗದೀಶ್ ಪ್ರಸಾದ್, ಸಿವಿಲ್ ಇಂಜಿನಿಯರ್ ಇವರು ಮಾತನಾಡಿ “ ಮನುಷ್ಯನು ಬೇರೆ ಬೇರೆ ಸ್ಥರಗಳಲ್ಲಿ ತರಬೇತಿ ಪಡೆಯುತ್ತಾನೆ.

ಇಂತಹ ಪೌರತ್ವ ತರಬೇತಿಗಳು ಮಾನವನ ಜೀವನ ರೂಪಿಸಲು ಸಹಕಾರಿಯಾಗುತ್ತವೆ. ಸಾವಿರ ವಿದ್ಯಾರ್ಥಿಗಳ ಜೀವನ ರೂಪಿಸುವ ಶಕ್ತಿ ನಿಮ್ಮಂತಹ ಶಿಕ್ಷಕರಲ್ಲಿದೆ. ಮಕ್ಕಳ ತಪ್ಪುಗಳನ್ನು ತಿದ್ದಿ ಕಷ್ಟಗಳನ್ನು ಎದುರಿಸಲು ನಗುಮೊಗದಿ ತಿಳಿಹೇಳುವುದು ಕೂಡ ಒಂದು ಕಲೆ ” ಎಂದು ಹೇಳಿದರು.


ಶಿಬಿರದ ಅಧ್ಯಕ್ಷತೆಯನ್ನು ವಹಿಸಿದ ಪ್ರೊ. ಶಶಿಶೇಖರ ಎನ್ ಕಾಕತ್ಕರ್, ಶೈಕ್ಷಣಿಕ ಸಂಯೋಜಕರು, ಶ್ರೀ ಧ. ಮಂ. ಶಿಕ್ಷಣ ಸಂಸ್ಥೆ, ಉಜಿರೆ ಇವರು ಮಾತನಾಡುತ್ತಾ “ ಭಾವೈಕ್ಯತೆ, ಸಹಬಾಳ್ವೆ, ಕರ್ತವ್ಯ ನಿರ್ವಹಣೆ, ಮಾತುಗಾರಿಕೆ ಮತ್ತು ಹೊಂದಾಣಿಕೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಹಾಗೂ ಎಲ್ಲವ ಕಲಿತ ಮಾನವನನ್ನು, ಮಾನವೀಯ ಮೌಲ್ಯಗಳೊಂದಿಗೆ ಬಾಳಲು ಕಲಿಸುವ ಶಿಬಿರಗಳು ಎಲ್ಲರಿಗೂ ಸ್ಫೂರ್ತಿ. ಶಿಕ್ಷಕ ವೃತ್ತಿ ಎನ್ನುವುದು ಪವಿತ್ರವಾದುದು. ಬೋಧನೆ, ಪ್ರೇರಣೆ, ಮೌಲ್ಯಗಳು ಹಾಗೂ ಮಾರ್ಗದರ್ಶನವನ್ನು ನೀಡುವುದು ಶಿಕ್ಷಕನಾದವನ ಆದ್ಯ ಕರ್ತವ್ಯ ” ಎಂದು ಹೇಳಿದರು.


ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ಮಂಜು ಆರ್, ರತ್ನಮಾನಸದ ನಿಲಯಪಾಲಕರಾದ ಯತೀಶ್ ಕೆ ಬಳಂಜ ಅವರು ಶಿಬಿರಕ್ಕೆ ಶುಭ ಹಾರೈಸಿದರು. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿ ವೀಕ್ಷಾದೀಪ, ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿ ರಂಝಿಯಾ ಬಾನು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ವೀಕ್ಷಾದೀಪ ಸ್ವಾಗತಿಸಿ, ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಸಾಯಿಧೃತಿ ವಂದಿಸಿ, ವರ್ಷಾ ಅತಿಥಿ ಪರಿಚಯಿಸಿದರು. ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ರಶ್ಮಿ ಕೆ ಪಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya
error: Content is protected !!