July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

ಕಣಿಯೂರು : ದೀಪಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಣಿಯೂರು ಇದರ ವಾರ್ಷಿಕ ಮಹಾಸಭೆ ಸೆ.24 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಶೀಲಾ ಪ್ರಾರ್ಥಿಸಿ, ಪ್ರಸ್ತಾವಿಕವಾಗಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ನಿತೀಶ್ ಸಂಜೀವಿನಿ ಯೋಜನೆಯಿಂದ ಸಿಗುವಂತಹ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ರೂಪಿಸಿಕೊಳ್ಳಬಹುದು ಅದಕ್ಕೆ ಸಂಬಂಧಪಟ್ಟಂತೆ ಬ್ಯಾಂಕ್ ಲಿಂಕೇಜ್ ಮಾಡಿ ಬ್ಯಾಂಕ್ ಲೋನ್ , pmfme ಸಾಲ ಸೌಲಭ್ಯ , ಮನೆಯಲ್ಲಿ ತಯಾರಿಸುವ ಉತ್ಪನ್ನಗಳಿಗೆ FSSAI ಸರ್ಟಿಫಿಕೆಟ್ , ಉದ್ಯಮ ಸರ್ಟಿಫಿಕೆಟ್ ಮಾಡಿಸಿಕೊಡುವ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಪಂಚಾಯತ್ ಅಧ್ಯಕ್ಷರು ದೀಪಾ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ದೀಪನಗೊಳಿಸಿ ಸಂಜೀವಿನಿ ಯೋಜನೆ ಮಹಿಳೆಯರಿಗೆ ಸಮಾಜದಲ್ಲಿ ಪುರುಷ ಸಮಾನರಾಗಿ ಎಲ್ಲಾ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಪಂಚಾಯತ್ನಿಂದ ನೀರಿನ ಬಿಲ್ ಕಲೆಕ್ಷನ್ ಸ್ವಚ್ಛತಾ ಸಿಬ್ಬಂದಿಗಳು ಹೀಗೆ ಎಲ್ಲದಕ್ಕೂ ಮಹಿಳೆಯರಿಗೆ ಅವಕಾಶ ನೀಡಲಾಗುತ್ತದೆ. ಮಹಿಳೆಯರು ಬಡ್ಡಿ ಸಹಾಯಧನದ ಸಾಲ ಸೌಲಭ್ಯ ಪಡೆದುಕೊಂಡು ಉತ್ತಮ ರೀತಿಯಲ್ಲಿ ಬದುಕು ಕಟ್ಟಿಕೊಳ್ಳಿ ಎಂದು ಶುಭಹಾರೈಸಿದರು.

ನಂತರ ವಾರ್ಷಿಕ ವರದಿ ಮತ್ತು ಸಿಎ ಆಡಿಟ್ ರಿಪೋರ್ಟ್ ನ್ನು ಲೋಕಮ್ಮ ಮಂಡಿಸಿ ಅನುಮೋದನೆ ಪಡೆದುಕೊಂಡರು ವಲಯ ಮೇಲ್ವಿಚಾರಕಿ ವೀಣಾಶ್ರೀ , ವಾರ್ಡ್ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಒಕ್ಕೂಟದ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು. ಸಂಘಗಳು ದಶಸೂತ್ರ ಗಳನ್ನು ಅಳವಡಿಸಿಕೊಳ್ಳಬೇಕು ಮಹಿಳೆಯರು ಸ್ವಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಸ್ತಾರವಾಗಿ ಮಾಹಿತಿ ನೀಡಿದರು.

ಸಂಜೀವಿನಿ ಸಂಘದ ಸದಸ್ಯೆ ಮನೆಯಲ್ಲಿ ತಯಾರಿಸಿದ ಮನೆಮದ್ದಿನ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಒಕ್ಕೂಟದಿಂದ ನಿರ್ಗಮಿತ ಸದಸ್ಯರಿಗೆ ಮತ್ತು ವೀಣಾಶ್ರೀ , ನಿತೇಶ್ ರವರಿಗೆ ಒಕ್ಕೂಟದ ಪರವಾಗಿ ಗೌರವ ಸ್ಮರಣಿಕೆ ನೀಡಲಾಯಿತು

Related posts

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!