24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಎರಡನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

2-10-2013 ರಂದು ಬೆಂಗಳೂರು ಬಾರ್ ಕೆಲಸಕ್ಕೆ ಹೋಗುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಮೂರನೇ ಮಗ ಆದಿಶೇಷ ನಾರಾಯಣ(27ವ) ಯುವಕ ಮನೆಗೆ ಬಂದು ಮೊಬೈಲ್ ಇಟ್ಟು ಮನೆಬಿಟ್ಟು ನಾಪತ್ತೆಯಾಗಿದ್ದವನ ಅಸ್ಥಿಪಂಜರ ಎಂದು ಎಸ್.ಐ.ಟಿ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಮೂಲಕ ಪತ್ತೆಹಚ್ಚಿದೆ. ಈ ಸಂಬಂಧ ಆದಿಶೇಷನ ಕುಟುಂಬ ಸದಸ್ಯರು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದು ಡ್ರೈವಿಂಗ್ ಲೈಸೆನ್ಸ್ ಮತ್ತು ಫೋಟೋ ಮೂಲಕ ಖಚಿತ ಪಡಿಸಿಕೊಂಡು ನಾಪತ್ತೆ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ಆದಿಶೇಷ ಅಕ್ಕ ಪದ್ಮ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆದಿಶೇಷ ನಾರಾಯಣ ಪದೆ ಪದೆ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

Related posts

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya
error: Content is protected !!