27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!