25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya
error: Content is protected !!