25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

ಬೆಳ್ತಂಗಡಿ: “ಕುಟುಂಬ ಎಂದರೆ ಕೇವಲ ಗಂಡ-ಹೆಂಡತಿ, ಸಂಸಾರವಲ್ಲ. ವೈಚಾರಿಕ ನೆಲೆಗಟ್ಟಿನಲ್ಲಿ ದೇಶದ ಅಭಿವೃದ್ಧಿ ಮಾಡುವ ಪರಿಕಲ್ಪನೆಯೇ ಕುಟುಂಬ” ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


ಪಿಇಎಸ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಭಾರತೀಯ ಮಜ್ದೂರು ಸಂಘ (BMS) ರಾಜ್ಯ ಶಾಖೆಯ 70ನೇ ವರ್ಷಾಚರಣೆ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ಕುಟುಂಬ ಸಂಗಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ದೇಶದಲ್ಲಿನ ಶೇ.35ರಷ್ಟು ಸೂಕ್ಷ್ಮ ಉದ್ಯಮಗಳು ದೇಶದ ಜಿಡಿಪಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದು, ಕೃಷಿಯ ನಂತರ ಎಂಎಸ್‌ಎಂಇ ಗಳು ದೇಶದ ಅತಿದೊಡ್ಡ ಉದ್ಯಮವಾಗಿವೆ ಎಂದು ಅವರು ಉಲ್ಲೇಖಿಸಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, “ಬಿಎಂಎಸ್ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಮುಟ್ಟಿಸುವ ಕೆಲಸ ಮಾಡುತ್ತಿದೆ. ಮುಂದೆಯೂ ಸರಕಾರ ಮತ್ತು ಕಾರ್ಮಿಕರ ನಡುವೆ ಸೇತುವೆಯಾಗಿ ಬಿಎಂಎಸ್ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಬಿಎಂಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಲ್. ವಿಶ್ವನಾಥ ಪ್ರಾಸ್ತಾವಿಕ ಮಾತನಾಡಿ, ರಾಜ್ಯಾಧ್ಯಕ್ಷ ಎನ್‌.ಕೆ. ಪ್ರಕಾಶ್ ಅಧ್ಯಕ್ಷತೆ ವಹಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಹಿಮೈ, ಅಖಿಲ ಭಾರತ ದಕ್ಷಿಣ ಮತ್ತು ದಕ್ಷಿಣ ಮಧ್ಯಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದುರೈರಾಜ್ ಹಾಗೂ ದಕ್ಷಿಣ ಮಧ್ಯಕ್ಷೇತ್ರೀಯ ನಾ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲೆಯಿಂದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ರಾಜ್ಯ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ಜಯರಾಜ್ ಸಾಲ್ಯಾನ್, ಜಿಲ್ಲೆಯ ಪದಾಧಿಕಾರಿಗಳಾದ ರೋಹಿತಾಶ್ವ, ವಸಂತ ಕುಮಾರ್ ಬಂಟ್ವಾಳ, ನಾರಾಯಣ ಪೂಜಾರಿ, ಕುಮಾರ್ ನಾಥ್ ಉಜಿರೆ, ಪ್ರಶಾಂತ್, ಕಿರಣ್ ಕುಮಾರ್, ಮಧುಸೂಧನ್ ಸುಳ್ಯ, ಪ್ರಕಾಶ್ ಸುಳ್ಯ, ರಾಜೇಶ್ ಪುತ್ತೂರು, ಪುರಂದರ ರೈ ಕುಂಬ್ರ, ಸಾಂತಪ್ಪ ಬೆಳ್ತಂಗಡಿ, ರಾಜೇಶ್ ಸುವರ್ಣ ಬೆದ್ರ, ಚಂದ್ರಶೇಖರ ಕಡಬ ಸಾಮೂವೆಲ್ ಮಂಗಳೂರು,ಮತ್ತು ಶ್ರೀಕಾಂತ್ ಬಂಟ್ವಾಳ ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಭವ್ಯಗೊಳಿಸಿದರು.

Related posts

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!