25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

ಬೆಳ್ತಂಗಡಿ: “ಕುಟುಂಬ ಎಂದರೆ ಕೇವಲ ಗಂಡ-ಹೆಂಡತಿ, ಸಂಸಾರವಲ್ಲ. ವೈಚಾರಿಕ ನೆಲೆಗಟ್ಟಿನಲ್ಲಿ ದೇಶದ ಅಭಿವೃದ್ಧಿ ಮಾಡುವ ಪರಿಕಲ್ಪನೆಯೇ ಕುಟುಂಬ” ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


ಪಿಇಎಸ್‌ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಭಾರತೀಯ ಮಜ್ದೂರು ಸಂಘ (BMS) ರಾಜ್ಯ ಶಾಖೆಯ 70ನೇ ವರ್ಷಾಚರಣೆ ಸಮಾರೋಪ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನದ ಅಂಗವಾಗಿ ಹಮ್ಮಿಕೊಂಡಿದ್ದ “ಕುಟುಂಬ ಸಂಗಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ದೇಶದಲ್ಲಿನ ಶೇ.35ರಷ್ಟು ಸೂಕ್ಷ್ಮ ಉದ್ಯಮಗಳು ದೇಶದ ಜಿಡಿಪಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದು, ಕೃಷಿಯ ನಂತರ ಎಂಎಸ್‌ಎಂಇ ಗಳು ದೇಶದ ಅತಿದೊಡ್ಡ ಉದ್ಯಮವಾಗಿವೆ ಎಂದು ಅವರು ಉಲ್ಲೇಖಿಸಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, “ಬಿಎಂಎಸ್ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾರ್ಮಿಕರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಮುಟ್ಟಿಸುವ ಕೆಲಸ ಮಾಡುತ್ತಿದೆ. ಮುಂದೆಯೂ ಸರಕಾರ ಮತ್ತು ಕಾರ್ಮಿಕರ ನಡುವೆ ಸೇತುವೆಯಾಗಿ ಬಿಎಂಎಸ್ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಬಿಎಂಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಲ್. ವಿಶ್ವನಾಥ ಪ್ರಾಸ್ತಾವಿಕ ಮಾತನಾಡಿ, ರಾಜ್ಯಾಧ್ಯಕ್ಷ ಎನ್‌.ಕೆ. ಪ್ರಕಾಶ್ ಅಧ್ಯಕ್ಷತೆ ವಹಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಹಿಮೈ, ಅಖಿಲ ಭಾರತ ದಕ್ಷಿಣ ಮತ್ತು ದಕ್ಷಿಣ ಮಧ್ಯಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದುರೈರಾಜ್ ಹಾಗೂ ದಕ್ಷಿಣ ಮಧ್ಯಕ್ಷೇತ್ರೀಯ ನಾ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.


ದಕ್ಷಿಣ ಕನ್ನಡ ಜಿಲ್ಲೆಯಿಂದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ರಾಜ್ಯ ಪದಾಧಿಕಾರಿಗಳಾದ ಸತೀಶ್ ಶೆಟ್ಟಿ, ಜಯರಾಜ್ ಸಾಲ್ಯಾನ್, ಜಿಲ್ಲೆಯ ಪದಾಧಿಕಾರಿಗಳಾದ ರೋಹಿತಾಶ್ವ, ವಸಂತ ಕುಮಾರ್ ಬಂಟ್ವಾಳ, ನಾರಾಯಣ ಪೂಜಾರಿ, ಕುಮಾರ್ ನಾಥ್ ಉಜಿರೆ, ಪ್ರಶಾಂತ್, ಕಿರಣ್ ಕುಮಾರ್, ಮಧುಸೂಧನ್ ಸುಳ್ಯ, ಪ್ರಕಾಶ್ ಸುಳ್ಯ, ರಾಜೇಶ್ ಪುತ್ತೂರು, ಪುರಂದರ ರೈ ಕುಂಬ್ರ, ಸಾಂತಪ್ಪ ಬೆಳ್ತಂಗಡಿ, ರಾಜೇಶ್ ಸುವರ್ಣ ಬೆದ್ರ, ಚಂದ್ರಶೇಖರ ಕಡಬ ಸಾಮೂವೆಲ್ ಮಂಗಳೂರು,ಮತ್ತು ಶ್ರೀಕಾಂತ್ ಬಂಟ್ವಾಳ ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಭವ್ಯಗೊಳಿಸಿದರು.

Related posts

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!