22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಲೈತ್ ಬೆಂಗಳೂರು ಹಾಗೂ ಐಎಸ್.ಟಿ.ಇ ಸಹಭಾಗಿತ್ವದೊಂದಿಗೆ ” ಎಜು – ಟೆಕ್ – ಲೈಫ್‌ಟೂಲ್ಸ್” ಎಂಬ ವಿಷಯದ ಕುರಿತು ಸೆ. 18 ಮತ್ತು 19 ರಂದು ” ಇನ್ನೋವೇಟ್-ಎ-ಥಾನ್ ” ಎನ್ನುವ ಎರಡು ದಿನದ ಹ್ಯಾಕಥಾನ್ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೆಲ್ತ್ಕೇರ್ ಟೆಕ್ನಾಲಜಿ ನಿರ್ದೇಶಕ ಸುನಿಲ್ ಪುರೋಹಿತ್ ಮಾತನಾಡಿ ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ, ಮತ್ತು ಸೃಜನಾತ್ಮಕ ಆಲೋಚನೆಗಳನ್ನು ಉದ್ಯಮಗಳಾಗಿ ಸ್ಟರ‍್ಟ್ಅಪ್ ಗಳ ಕಡೆಗೆ ಮುಂದುವರೆಯಬೇಕೆಂದು ವಿದ್ಯಾರ್ಥಿಗಳಿಗೆ ಉತ್ತೇಜಿಸಿದರು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಗೇನ್‌ವೆಲ್ ಟೆಕ್ನಾಲಜೀಸ್‌ನ ಪ್ರಮುಖ ಉತ್ಪನ್ನ ಮುಖ್ಯಸ್ಥ ರಾಜೇಶ್ ಹಿರಿಯಣ್ಣ ಅಂತಿಮ ಸುತ್ತಿನ ತೀರ್ಪುಗಾರರಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮತ್ತು ಮಾನವ ಸೃಜನಶೀಲತೆಯ ಸಮನ್ವಯದ ಮಹತ್ವವನ್ನು ಅವರು ವಿವರಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಗೆ ಆದ್ಯತೆ ನೀಡಲು ಮತ್ತು ಸಮಯವನ್ನು ಅರ್ಥಪೂರ್ಣವಾಗಿ ಬಳಸಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ 22 ತಂಡಗಳು ಭಾಗವಹಿಸಿದ್ದವು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅವರು ವಿದ್ಯಾರ್ಥಿಗಳ ಭಾಗವಹಿಸುವಿಕೆ ಮತ್ತು ಆವಿಷ್ಕಾರ ಮನೋಭಾವವನ್ನು ಪ್ರಶಂಸಿದರು. ಸಿವಿಲ್‌ವಿಭಾಗದ ಸಹ ಪ್ರಾದ್ಯಾಪಕರಾದ ವಿನಯ್ ಮತ್ತು ರಾಮಪ್ರಸಾದ್ ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!