25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಲೈತ್ ಬೆಂಗಳೂರು ಹಾಗೂ ಐಎಸ್.ಟಿ.ಇ ಸಹಭಾಗಿತ್ವದೊಂದಿಗೆ ” ಎಜು – ಟೆಕ್ – ಲೈಫ್‌ಟೂಲ್ಸ್” ಎಂಬ ವಿಷಯದ ಕುರಿತು ಸೆ. 18 ಮತ್ತು 19 ರಂದು ” ಇನ್ನೋವೇಟ್-ಎ-ಥಾನ್ ” ಎನ್ನುವ ಎರಡು ದಿನದ ಹ್ಯಾಕಥಾನ್ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೆಲ್ತ್ಕೇರ್ ಟೆಕ್ನಾಲಜಿ ನಿರ್ದೇಶಕ ಸುನಿಲ್ ಪುರೋಹಿತ್ ಮಾತನಾಡಿ ಬದಲಾಗುತ್ತಿರುವ ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ, ಮತ್ತು ಸೃಜನಾತ್ಮಕ ಆಲೋಚನೆಗಳನ್ನು ಉದ್ಯಮಗಳಾಗಿ ಸ್ಟರ‍್ಟ್ಅಪ್ ಗಳ ಕಡೆಗೆ ಮುಂದುವರೆಯಬೇಕೆಂದು ವಿದ್ಯಾರ್ಥಿಗಳಿಗೆ ಉತ್ತೇಜಿಸಿದರು.

ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಗೇನ್‌ವೆಲ್ ಟೆಕ್ನಾಲಜೀಸ್‌ನ ಪ್ರಮುಖ ಉತ್ಪನ್ನ ಮುಖ್ಯಸ್ಥ ರಾಜೇಶ್ ಹಿರಿಯಣ್ಣ ಅಂತಿಮ ಸುತ್ತಿನ ತೀರ್ಪುಗಾರರಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೃತಕ ಬುದ್ಧಿಮತ್ತೆ ಮತ್ತು ಮಾನವ ಸೃಜನಶೀಲತೆಯ ಸಮನ್ವಯದ ಮಹತ್ವವನ್ನು ಅವರು ವಿವರಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಗೆ ಆದ್ಯತೆ ನೀಡಲು ಮತ್ತು ಸಮಯವನ್ನು ಅರ್ಥಪೂರ್ಣವಾಗಿ ಬಳಸಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ 22 ತಂಡಗಳು ಭಾಗವಹಿಸಿದ್ದವು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅವರು ವಿದ್ಯಾರ್ಥಿಗಳ ಭಾಗವಹಿಸುವಿಕೆ ಮತ್ತು ಆವಿಷ್ಕಾರ ಮನೋಭಾವವನ್ನು ಪ್ರಶಂಸಿದರು. ಸಿವಿಲ್‌ವಿಭಾಗದ ಸಹ ಪ್ರಾದ್ಯಾಪಕರಾದ ವಿನಯ್ ಮತ್ತು ರಾಮಪ್ರಸಾದ್ ಕಾರ್ಯಕ್ರಮವನ್ನು ಸಂಘಟಿಸಿದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya
error: Content is protected !!