22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

ಬೆಳ್ತಂಗಡಿ: ಜನಸ್ನೇಹಿ ಪೊಲೀಸ್ ಅಧಿಕಾರಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ಕಚೇರಿಯ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅವರು ೩೩ ವರ್ಷ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಸೆ.೩೦ರಂದು ಸೇವಾ ನಿವೃತ್ತಿಗೊಳ್ಳುತ್ತಿದ್ದಾರೆ.


ಇವರು ೧೯೯೨ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಚೆನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯಲ್ಲಿ ಮೂಲ ತರಬೇತಿ ಪಡೆದು, ಸಿಬ್ಬಂದಿಯಾಗಿ ಮಂಗಳೂರು ಸಂಚಾರ ಪಶ್ಚಿಮ, ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭ ೨೦೦೩ರಲ್ಲಿ ಪಿಎಸ್‌ಐ ಆಗಿ ನೇರ ನೇಮಕಾತಿಗೊಂಡು ಯಲಹಂಕ ಪೋಲಿಸ್ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದರು. ಎಸ್‌ಐ ಆಗಿ ಬೆಂಗಳೂರಿನ ವೈಯ್ಯಲಿಕಾವಲ್, ಉಪ್ಪಿನಂಗಡಿ, ದಕ್ಷಿಣ ಕನ್ನಡ ಅಬಕಾರಿ ಸ್ಕಾ÷್ವಡ್, ವೇಣೂರು, ಯಗಟಿ, ಪುತ್ತೂರು ಸಂಚಾರ, ಬಂಟ್ವಾಳ ನಗರ, ಸುಬ್ರಹ್ಮಣ್ಯ, ಕಾರವಾರ ಸಂಚಾರ ಹಾಗೂ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸಿದರು. ೨೦೧೫ ರಲ್ಲಿ ಪೋಲೀಸ್ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಇವರು ದ.ಕ. ಜಿಲ್ಲಾ ವಿಶೇಷ ಘಟಕ, ಬೆಳ್ತಂಗಡಿ ವೃತ್ತ, ಮೈಸೂರು ಸಂಚಾರ, ಉಪ್ಪಿನಂಗಡಿ, ಡಿಸಿಐಬಿ ಮಡಿಕೇರಿ, ಐಜಿಪಿ ಕಚೇರಿ ಮಂಗಳೂರು, ಡಿಸಿಆರ್‌ಬಿ ಕೊಡಗು, ಕಾರ್ಕಳ ನಗರ ಬೆಳ್ತಂಗಡಿ ಗ್ರಾಮಾಂತರ ವೃತ್ತದಲ್ಲಿ ಕರ್ತವ್ಯ ಸಲ್ಲಿಸಿ ಸೇವಾ ನಿವೃತ್ತಿ ಹೊಂದಲಿದ್ದಾರೆ.


1965ರ ಸೆಪ್ಟೆಂಬರ್ 15ರಂದು ತುಕ್ರ ಮಡಿವಾಳ ಹಾಗೂ ಜಾನಕಿ ದಂಪತಿ ಪುತ್ರನಾಗಿ ಜನಿಸಿದರು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಪತ್ನಿ ಕಲ್ಪನಾ ಹಾಗೂ ಉಪನ್ಯಾಸಕಿಯಾಗಿರುವ ಪುತ್ರಿ ಮೈತ್ರಿ ಮತ್ತು ವೈದ್ಯ ವೃತ್ತಿ ನಡೆಸುತ್ತಿರುವ ಪುತ್ರ ಮಿತ್ರನ್‌ರವರೊಂದಿಗೆ ಮೂಡುಬಿದಿರೆಯ ರತ್ನಾಕರ ವರ್ಣಿ ನಗರದಲ್ಲಿ ನೆಲೆಸಿದ್ದಾರೆ. ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕದ್ರಿಯಲ್ಲಿ ಹಾಗೂ ಪ್ರೌಢ ಶಿಕ್ಷಣ ಗಣಪತಿ ಹೈಸ್ಕೂಲ್ ಹಂಪನಕಟ್ಟೆ, ಪಿಯುಸಿ ಸರ್ಕಾರಿ ಕಾಲೇಜು ಮಂಗಳೂರು ಹಾಗೂ ಪದವಿ ವಿದ್ಯಾಭ್ಯಾಸವನ್ನು ಮಂಗಳೂರು ಸೈಂಟ್ ಅಲೋಶಿಯಸ್ ಇವಿನಿಂಗ್ ಕಾಲೇಜಿನಲ್ಲಿ ಪೂರೈಸಿದ್ದಾರೆ. ದಕ್ಷ, ಪ್ರಾಮಾಣಿಕ, ಜನಸ್ನೇಹಿ ಅಧಿಕಾರಿಯಾಗಿ, ಸಿಬ್ಬಂದಿಗಳೊAದಿಗೆ ಉತ್ತಮ ಭಾಂದವ್ಯ ಹೊಂದಿದ್ದರು. ಕಳ್ಳತನ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದರು.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!