ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.
ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.











