July 23, 2026
ತಾಲೂಕು ಸುದ್ದಿಬೆಳ್ತಂಗಡಿ

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 15 ವರ್ಷಗಳಿಂದ ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಪರಿಣಿತಿಯನ್ನು ಹೊಂದಿದ್ದು, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ ಗ್ರಾಹಕರ ಪ್ರೀತಿ-ವಿಶ್ವಾಸ ನಂಬಿಕೆ ಗಳಿಸಿ ಹೊಸತನದೊಂದಿಗೆ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಸೆ. 25 ರಂದು ಪ್ರಾರಂಭಗೊಳ್ಳಲಿದೆ.

ನವೀಕರಣಗೊಂಡ ನೂತನ ಸಂಸ್ಥೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ದೀಪ ಪ್ರಜ್ವಲನೆಗೈದು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಅರಿಹಂತ್ ಅವರ ಮನೆಯವರು,ಬಂಧು- ಮಿತ್ರರು ಭಾಗವಹಿಸಲಿದ್ದಾರೆ.ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಸಂಸ್ಥೆಯು ವಿವಿಧ ಕಂಪನಿಯ, ವಿನೂತನ ಮಾದರಿಯ ಗುಣಮಟ್ಟದ ಮೊಬೈಲ್ ಗಳನ್ನು ಗ್ರಾಹಕರಿಗೆ ಪರಿಚಯಿಸಿ ಯಶಸ್ವಿಯಾಗಿದ್ದಾರೆ.ಇಗಾಗಲೇ ಅರಿಹಂತ್ ಅವರು ಮೊಬೈಲ್ ಸೇಲ್ಸ್ ನೊಂದಿಗೆ ,ಸರ್ವಿಸ್ ಗೆ ಪ್ರಾಮುಖ್ಯತೆಯನ್ನು ನೀಡುತ್ತಿದ್ದು ಗ್ರಾಹಕರಿಗೆ ತಕ್ಷಣ ಸ್ಪಂದಿಸುತ್ತಿದ್ದಾರೆ.

Related posts

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya
error: Content is protected !!