30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಗಳ ಮಹತ್ವವನ್ನು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಾಣಿ ಪಿಯು ಕಾಲೇಜಿನ ಉಪನ್ಯಾಸಕ ಸುಧೀರ್ ಕೆ.ಎನ್. ಮಾತನಾಡಿ ಸ್ವಭಾವ ನಿರ್ಮಾಣ ಮತ್ತು ಅದರ ಮೂಲಕ ಭವಿಷ್ಯ ರೂಪಿಸುವ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಅರಿವು ಮೂಡಿಸುವಂತಹ ಸಕ್ರಿಯ ಚಟುವಟಿಕೆಗಳನ್ನೂ ನಡೆಸಿ, ಅವರಲ್ಲಿ ಆತ್ಮವಿಶ್ವಾಸ ಮತ್ತು ಜವಾಬ್ದಾರಿತನ ಬೆಳೆಸುವ ಸಂದೇಶ ನೀಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮತ್ತು ಉತ್ತಮ ಭವಿಷ್ಯ ನಿರ್ಮಾಣದ ಬಲವಾದ ಪ್ರೇರಣೆಯಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿರಾದ ಅಶ್ವಿನಿ ಹಾಗೂ ರಕ್ಷಾ ನಿರ್ವಹಿಸಿದರು.

Related posts

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಮುಂಡಾಜೆ: ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!