23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಮೌಲ್ಯಗಳ ಮಹತ್ವವನ್ನು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಾಣಿ ಪಿಯು ಕಾಲೇಜಿನ ಉಪನ್ಯಾಸಕ ಸುಧೀರ್ ಕೆ.ಎನ್. ಮಾತನಾಡಿ ಸ್ವಭಾವ ನಿರ್ಮಾಣ ಮತ್ತು ಅದರ ಮೂಲಕ ಭವಿಷ್ಯ ರೂಪಿಸುವ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಅರಿವು ಮೂಡಿಸುವಂತಹ ಸಕ್ರಿಯ ಚಟುವಟಿಕೆಗಳನ್ನೂ ನಡೆಸಿ, ಅವರಲ್ಲಿ ಆತ್ಮವಿಶ್ವಾಸ ಮತ್ತು ಜವಾಬ್ದಾರಿತನ ಬೆಳೆಸುವ ಸಂದೇಶ ನೀಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮತ್ತು ಉತ್ತಮ ಭವಿಷ್ಯ ನಿರ್ಮಾಣದ ಬಲವಾದ ಪ್ರೇರಣೆಯಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕಿರಾದ ಅಶ್ವಿನಿ ಹಾಗೂ ರಕ್ಷಾ ನಿರ್ವಹಿಸಿದರು.

Related posts

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!