23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸ್ವಯಂಸೇವಕರಿಗೆ ಒಂದು ದಿನದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಸೆ.25 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಖ್ಯ ತರಬೇತುದಾರರಾಗಿ ಆಗಮಿಸಿದ ಮಂಗಳೂರಿನ ನ್ಯಾಯವಾದಿ ಮತ್ತು ಪ್ರಥಮ ಚಿಕಿತ್ಸಾ ತರಬೇತುದಾರ ಸಂತೋಷ್ ಪೀಟರ್ ಡಿ’ಸೋಜಾ ಆಗಮಿಸಿ, ಪ್ರಥಮ ಚಿಕಿತ್ಸೆ ಮತ್ತು ಸಿ.ಪಿ.ಆರ್ ಕುರಿತಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸಂತೋಷ್ ವಹಿಸಿಕೊಂಡಿದ್ದರು, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಅವನೀಶ್.ಪಿ, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಅನುಶ್ರೀ ಮತ್ತು ಬೋಧಕಿ ಶ್ರೀಮತಿ ಮಾಲತಿ ಸೇರಿದಂತೆ ಪ್ರಥಮ ವರ್ಷದ 60 ಸ್ವಯಂಸೇವಕರು ಈ ತರಬೇತಿಯ ಪ್ರಯೋಜನವನ್ನು ಪಡೆದರು.

Related posts

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!