March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

ಧರ್ಮಸ್ಥಳ:ಶಾಂತಿವನದಲ್ಲಿ ನವೀಕರಣಗೊಂಡ ಸಿಂದೂರ ಮಹಿಳಾ ಚಿಕಿತ್ಸಾ ವಿಭಾಗವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಶ್ರದ್ದಾ ಅಮಿತ್ ಅವರು ಸೆ. 25 ರಂದು ಲೋಕಾರ್ಪಣೆಗೊಳಿಸಿ ಭಾರತೀಯ ಸಂಸ್ಕೃತಿಯಲ್ಲಿ ಸಿಂದೂರಕ್ಕೆ ಮಹತ್ವ ಇದೆ. ನವೀಕರಣಗೊಂಡ ಮಹಿಳೆಯರ ಚಿಕಿತ್ಸಾ ವಿಭಾಗಕ್ಕೆ ಸಿಂದೂರ ಹೆಸರಿಟ್ಟರುವಂತದ್ದು ಸಂತೋಷ ತಂದಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಾಂತಿವನ ಎಂಬುದು ಶಾಂತಿ ಮತ್ತು ನಿರ್ಮಲತೆಯ ತಾಣವಾಗಿದ್ದು ಉತ್ತಮ ಚಿಕಿತ್ಸೆ ಸಿಗುತ್ತಿದೆ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್,ಉಜಿರೆ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಶಾಂತ್ ಶೆಟ್ಟಿ,ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ, ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ, ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶಾಂತಿವನದ ಆಡಳಿತಾಧಿಕಾರಿ ಜಗನ್ನಾಥ್ ಯು ಉಪಸ್ಥಿತರಿದ್ದರು.

ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ ಪ್ರಾಸ್ತಾವಿಕ ಮಾತನ್ನಾಡಿ ಸ್ವಾಗತಿಸಿದರು. ಭಾಷಿಣಿ ಮತ್ತು ಸಂಗಡಿಗರು ಪ್ರಾರ್ಥನೆಗೈದರು. ಡಾ.ಧನ್ಯಶ್ರಿ ನಿರೂಪಿಸಿದರು.

Related posts

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya
error: Content is protected !!