22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!