September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು ವಲಯಮೇಲ್ವಿಚಾರಕರು ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯಕ್ರಮ ವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು.

ಸ್ವಚ್ಛತಾ ಸಿಬ್ಬಂದಿ ರೇವತಿ ಮತ್ತು ಸಮುದಾಯ ಬಂಡವಾಳ ನಿಧಿ ಸಾಲ ಪಡೆದು ಹೈನುಗಾರಿಕೆ ನಡೆಸಿ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಿದ ನಾಗಮ್ಮ ಇವರನ್ನು ಒಕ್ಕೂಟದ ವತಿಯಿಂದ ಅಭಿನಂದಿಸಲಾಯಿ‌ತು.

ವಲಯ ಮೇಲ್ವಿಚಾರಕರು ಸಂಜೀವಿನಿ ಯೋಜನೆಯ ಉದ್ದೇಶ ಮತ್ತು ಮಹಿಳೆಯರು ಸ್ವಉದ್ಯೋಗ ಮಾಡಿ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬೇಕು ಮತ್ತು ಮಹಿಳೆಯರಿಗೆ ಸಿಗುವಂತಹ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಎಲ್ಲರನ್ನು ಶುಭ ಹಾರೈಸಿದರು. ಸಭೆಯಲ್ಲಿ ಸಂಜೀವಿನಿ ಧ್ಯೇಯ ಗೀತೆ ಹಾಡಲಾಯಿತು. ಅದೃಷ್ಟ ಮಹಿಳೆ ಎಂಬ ಆಟ ನಡೆಸಿ ಬಹುಮಾನ ವಿತರಿಸಲಾಯಿತು. ಹೊಸದಾಗಿ ರಚನೆಯಾದ ಸಂಘದ ಸದಸ್ಯರನ್ನು ಹೂವು ನೀಡುವುದರ ಮೂಲಕ ಒಕ್ಕೂಟಕ್ಕೆ ಸ್ವಾಗತಿಸಲಾಯಿತು.ಸಿಹೆಚ್ ಒ ರಮ್ಯಾ ಲಿಂಗತ್ವ ಆಧಾರಿತ ಮಾಹಿತಿ ಮತ್ತು ಆರೋಗ್ಯದ ಬಗೆಗಿನ ಮಾಹಿತಿಯನ್ನು ಉತ್ತಮ ರೀತಿಯಲ್ಲಿ ನೀಡಿದರು.

ವಿನೋದ ಸ್ವಾಗತಿಸಿದರು. ಕೃಷಿ ಸಖಿ ಹೇಮಾವತಿ 2024-25 ರ ವಾರ್ಷಿಕ ವರದಿಯನ್ನು, ರೇಖಾ ನಿರೂಪಿಸಿ ಜಮಾ ಮತ್ತು ಖರ್ಚು ಮಂಡಿಸಿದರು. ಪೂರ್ಣಿಮಾ ಅವರು ಧನ್ಯವಾದವಿತ್ತರು.

Related posts

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya
error: Content is protected !!