22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

ಬೆಳ್ತಂಗಡಿ: ಸಾಹಿತಿಕವಾಗಿ ಮತ್ತು ಸಾಮಾಜಿಕವಾಗಿ ತುಂಬು ಬದುಕನ್ನು ನಡೆಸಿದ ಎಸ್ ಎಲ್ ಭೈರಪ್ಪ ಅವರ ವ್ಯಕ್ತಿತ್ವ ಆದರ್ಶಪ್ರಾಯವಾದದ್ದು ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಭ್ಯುದಯ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ಜರುಗಿದ ಎಸ್ ಎಲ್ ಬೈರಪ್ಪ ಅವರಿಗೆ ನುಡಿ ನಮನ ಸಲ್ಲಿಸುತ್ತಾ, ಭೈರಪ್ಪ ಅವರ ಕೃತಿಗಳಲ್ಲಿ ಎಲ್ಲವನ್ನೂ ಪ್ರಶ್ನಿಸುವಂತಹ ಮನೋಧಾಡ್ಯತೆ ಕಂಡು ಬರುತ್ತಿದ್ದು ಸಾಮಾಜಿಕ ಸಂಘರ್ಷ, ಇತಿಹಾಸ, ಧರ್ಮ, ಶಿಕ್ಷಣ, ತತ್ವಶಾಸ್ತ್ರ ಮುಂತಾದ ವಿಷಯಗಳು ತಿಳಿದು ಬರುತ್ತದೆ. ಮನುಷ್ಯ ಸಂಬಂಧದ ಆಳಕ್ಕೆ ಇಳಿದು ನೈತಿಕ ಮೌಲ್ಯಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಭೈರಪ್ಪರಂತಹ ಮಹಾನ್ ವ್ಯಕ್ತಿಗಳ ವ್ಯಕ್ತಿತ್ವ ಹಾಗೂ ವಿಚಾರಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ ಎಂದರು.


ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕಿ ರಮ್ಯಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya
error: Content is protected !!