37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ. 25ರಂದು ಪಶುಸಂಗೋಪನಾ ಇಲಾಖೆ ಬೆಳ್ತಂಗಡಿ ಇದರ ವತಿಯಿಂದ ರೇಬಿಸ್ ಜಾಗೃತಿ ಕಾರ್ಯಕ್ರಮ ನೆರವೇರಿತು.

ಸಂಪನ್ಮೂಲ ವ್ಯಕ್ತಿಯಾಗಿ ಪಶು ಸಂಗೋಪನಾ ಇಲಾಖಾಧಿಕಾರಿಯಾದ ಸದಾಶಿವ ಭಟ್ ಮಾಹಿತಿ ನೀಡಿ, ಪ್ರಾಣಿ ಕಡಿತದ ಸಮಯದಲ್ಲಿ ಪಡೆಯುವ ತಕ್ಷಣದ ಚಿಕಿತ್ಸೆಯೇ ಪರಿಹಾರೋಪಾಯಗಳಲ್ಲಿ ಪ್ರಧಾನ. ಪ್ರಾಣಿಗಳ ಜೊತೆಗಿನ ಒಡನಾಟದ ಬಗ್ಗೆ ಎಚ್ಚರವಿರಲಿ ಎಂದರು.‌ ಪಶುವೈದ್ಯರಾದ ನಾಗಶಯನ ರಾವ್ ಮತ್ತು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇದರ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ ಬಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿಶಾ ವೈ ಶೆಟ್ಟಿ, ರಂಜಿನಿ, ಸ್ಫೂರ್ತಿ ಪ್ರಾರ್ಥಿಸಿದ ಸಭೆಯನ್ನು ಶಿಕ್ಷಕ ತೀರ್ಥ ಪ್ರಸಾದ್ ಸಮಗ್ರವಾಗಿ ನಿರೂಪಿಸಿದರು . ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ , ಗಣಿತ ಶಿಕ್ಷಕ ಸಾರ್ಥಕ್ ಜೈನ್ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

Related posts

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya
error: Content is protected !!