25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ನಿಡ್ಲೆ: ಎಮ್.ಸಿ.ಎಫ್.ಎಲ್ ಮಂಗಳೂರು ವತಿಯಿಂದ ಒದಗಿಸುವ 2 ಕೊಠಡಿಗಳೂ ಸೇರಿದಂತೆ ನಿಡ್ಲೆ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್.ಮೂಲಕ ನಿರ್ಮಾಣವಾಗುವ ನೂತನ ಶಾಲಾ ಕಟ್ಟಡದ “ಶಿಲಾನ್ಯಾಸ”ವನ್ನು ಸೆ.26ರಂದು ನೆರವೇರಿಸಲಾಯಿತು.

ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಶಿಲಾನ್ಯಾಸ ನೆರವೇರಿಸಿ ಶುಭಹಾರೈಸಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯರಾದ ಸತ್ಯನಾರಾಯಣ ರಾವ್ ಪೈರೋಡಿ, ವೇಣೂರು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ, ಎಂಸಿಎಫ್ಎಲ್ ನ ಅಸಿಸ್ಟೆಂಟ್ ಮ್ಯಾನೇಜರ್ ರಾಕೇಶ್, ಸೀನಿಯರ್ ಮ್ಯಾನೇಜರ್ ವಿವೇಕ್ ಕೋಟ್ಯಾನ್, ಕಂಟ್ರಾಕ್ಟರ್ ಸದಾಶಿವ ಸುವರ್ಣ, ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ನೂಜಿಲ ಉಪಸ್ಥಿತರಿದ್ದರು.


ಶಾಲಾ ಮಕ್ಕಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಶಾಂತ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾಜಗುರು ಹೆಬ್ಬಾರ್ ಮಾಡಂಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶರತ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ರೂ. 10,000 ದೇಣಿಗೆ ನೀಡಿದ ಯುವ ಸಮೂಹ ಬೂಡುಜಾಲು ಹಾಗೂ ರೂ. 25,000ನೀಡಿದ ಕಂಟ್ರಾಕ್ಟರ್ ಸದಾಶಿವ ಸುವರ್ಣ ರವರನ್ನು ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಹಳೆ ವಿದ್ಯಾರ್ಥಿಗಳ ಸೇವಾ ಸಂಘದ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಮಕ್ಕಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya
error: Content is protected !!