July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಬೆಳ್ತಂಗಡಿ: ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ನಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಸೆ.25 ರಂದು ಭವ್ಯವಾಗಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಗುರುರಾಜ ಪಡ್ವೇತನಯ, ಹಿರಿಯ ಫಾರ್ಮಸಿಸ್ಟ್, ಗುರುದೇವಿ ಮೆಡಿಕಲ್, ಉಜಿರೆ ಅವರು ಆಗಮಿಸಿ, ಫಾರ್ಮಸಿಸ್ಟ್ ವೃತ್ತಿಯ ಮಹತ್ವ ಹಾಗೂ ಆರೋಗ್ಯ ಸೇವೆಯಲ್ಲಿ ಅವರ ಅವಿಭಾಜ್ಯ ಪಾತ್ರವನ್ನು ವಿವರಿಸಿದರು.

ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ. ರೇಷ್ಮಾ ಜಿ ಗೌಡ, ಪ್ರಸನ್ನ ಆಯುರ್ವೇದ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಬಿ.ಕೆ. ಪ್ರಶಾಂತ್, ಹಾಗೂ ಪ್ರಸನ್ನ ಐಟಿಐ ಕಾಲೇಜು ಪ್ರಾಂಶುಪಾಲ ಅಖಿಲೇಶ್ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲರೂ ಒಟ್ಟಾಗಿ ಔಷಧಶಾಸ್ತ್ರಜ್ಞರ ಪ್ರತಿಜ್ಞಾ ವಚನ ಸ್ವೀಕರಿಸಿದರು. ಅತಿಥಿಗಳ ಪ್ರೇರಣಾದಾಯಕ ಭಾಷಣದಿಂದ ವಿದ್ಯಾರ್ಥಿಗಳಲ್ಲಿ ಫಾರ್ಮಸಿ ವೃತ್ತಿಯ ಬಗ್ಗೆ ಅರಿವು ಹಾಗೂ ಹೊಣೆಗಾರಿಕೆಯ ಭಾವನೆ ಇನ್ನಷ್ಟು ಗಾಢವಾಯಿತು.


ಸಮಾರಂಭವನ್ನು ಪ್ರತೀಕ್ಷಾ ನಿರೂಪಿಸಿದರು. ಹಿಲಾನಾ ಸ್ವಾಗತಿಸಿ, ಡಾ. ದೀಕ್ಷಾ ಕೃತಜ್ಞತಾಪೂರ್ವಕ ವಂದನಾ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya
error: Content is protected !!