July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಪ್ರಮುಖ ನ್ಯಾಯವಾದಿ ಬಿ.ಕೆ ನವೀನ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು, ಇಂಟರ್ನೆಟ್ ಮತ್ತು ಡಿಜಿಟಲ್ ಸಾಧನಗಳನ್ನು ಬಳಸುವಾಗ ನಮ್ಮ ವೈಯುಕ್ತಿಕ ಮಾಹಿತಿ, ಖಾತೆಗಳು, ಸಾಧನೆಗಳ ಗೌಪ್ಯತೆಯನ್ನು ರಕ್ಷಿಸುವ ಕ್ರಮಗಳು ಹಾಗೂ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್ ತಂತ್ರಜ್ಞಾನಗಳನ್ನು ಜಾಗರೂಕತೆಯಿಂದ ಇತರರಿಗೆ ಹಾನಿ ಮಾಡದಂತೆ ಸಮಾಜಕ್ಕೆ ಒಳ್ಳೆಯದನ್ನುಂಟು ಮಾಡುವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುಣ್ಣ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿನಿ ಫಾತಿಮಾ ರಿಧಾ ನಿರೂಪಿಸಿ ಮರಿಟ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!