September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಪ್ರಮುಖ ನ್ಯಾಯವಾದಿ ಬಿ.ಕೆ ನವೀನ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು, ಇಂಟರ್ನೆಟ್ ಮತ್ತು ಡಿಜಿಟಲ್ ಸಾಧನಗಳನ್ನು ಬಳಸುವಾಗ ನಮ್ಮ ವೈಯುಕ್ತಿಕ ಮಾಹಿತಿ, ಖಾತೆಗಳು, ಸಾಧನೆಗಳ ಗೌಪ್ಯತೆಯನ್ನು ರಕ್ಷಿಸುವ ಕ್ರಮಗಳು ಹಾಗೂ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್ ತಂತ್ರಜ್ಞಾನಗಳನ್ನು ಜಾಗರೂಕತೆಯಿಂದ ಇತರರಿಗೆ ಹಾನಿ ಮಾಡದಂತೆ ಸಮಾಜಕ್ಕೆ ಒಳ್ಳೆಯದನ್ನುಂಟು ಮಾಡುವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುಣ್ಣ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿನಿ ಫಾತಿಮಾ ರಿಧಾ ನಿರೂಪಿಸಿ ಮರಿಟ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!