22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ /ಹೆಚ್. ಆರ್. ಡಿ. ಚಟುವಟಿಕೆಗಳನ್ನು ನಡೆಸಲು ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸೆ. 26ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾ‌ರ್, ಜಿ.ಪಂ. ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿಘ್ನಶ್ ರಾಜ್ ಬಿ. ಕೆ., ಗ್ರಾಮೀಣ ಕುಡಿಯುವ ನೀರು ಇಲಾಖೆಯ ಜೆ. ಇ. ಲಕ್ಷ್ಮೀ, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ನಂತರ ಜೆಲಜೀವನ್ ಮಿಷನ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಸುರೇಶ್ ಬಾಳಿಲ, ಅಸ್ಮಿತಾ, ನಾಗಲಿಂಗಯ್ಯ ಸ್ವಾಮಿ, ಶರತ್ ಕುಮಾರ್ ಹಾಜರಿದ್ದು ವಿವಿಧ ತರಬೇತಿ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂದಿದ್ದರು. ಜೆ ಜೆ ಎಂ ತಂಡದ ನಾಯಕ ಮಿಥುನ್ ಕುಮಾರ್, ಸಂಯೋಜಕಿ ಧರ್ಮಶ್ರೀ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು. ಜೆಜೆಎಂ ಸಂಯೋಜಕ ಶಿವರಾಮ ಪಿ. ಬಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!