25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಸೆ.25 ರಂದು ಪುತ್ತೂರು ಶಂಕರ ಗ್ರೂಪ್ ನ ಮೇಘ ಫ್ರೂಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಬಿಂದು ಕಂಪನಿಗೆ ಕೈಗಾರಿಕಾ ಅಧ್ಯಯನ ಪ್ರವಾಸ ಕೈಗೊಂಡರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಒಟ್ಟು 77ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಲ್ಲಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ , ವಿದ್ಯಾರ್ಥಿಗಳಿಗೆ ಕೈಗಾರಿಕೆಯ ಕಾರ್ಯವಿಧಾನದ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಇಂಗ್ಲೀಷ್ ಉಪನ್ಯಾಸಕರಾದ ಸುಭಕರ್ ಇವರು ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕೈಗಾರಿಕೆಯ ಕಾರ್ಯವಿಧಾನ, ಉತ್ಪಾದನಾ ಕ್ರಮ ಮತ್ತು ನವೀನ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳು ನೇರವಾಗಿ ಅವಲೋಕನ ನಡೆಸಿ ಪಾರದರ್ಶಕ ಜ್ಞಾನವನ್ನು ಸಂಪಾದಿಸಿದರು.

ಇಂತಹ ಅಧ್ಯಯನ ಪ್ರವಾಸಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿದ್ದು, ಭವಿಷ್ಯದ ವೃತ್ತಿಜೀವನಕ್ಕೆ ಮಾರ್ಗದರ್ಶಕವಾಗುತ್ತದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು .

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya
error: Content is protected !!