22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ಹಾಗೂ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳು ಸೆ.25 ರಂದು ಪುತ್ತೂರು ಶಂಕರ ಗ್ರೂಪ್ ನ ಮೇಘ ಫ್ರೂಟ್ ಪ್ರೊಸೆಸಿಂಗ್ ಪ್ರೈವೆಟ್ ಲಿಮಿಟೆಡ್ ಬಿಂದು ಕಂಪನಿಗೆ ಕೈಗಾರಿಕಾ ಅಧ್ಯಯನ ಪ್ರವಾಸ ಕೈಗೊಂಡರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಒಟ್ಟು 77ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಲ್ಲಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ , ವಿದ್ಯಾರ್ಥಿಗಳಿಗೆ ಕೈಗಾರಿಕೆಯ ಕಾರ್ಯವಿಧಾನದ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿದರು.

ಈ ಕೈಗಾರಿಕ ಅಧ್ಯಯನ ಪ್ರವಾಸದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ಇಂಗ್ಲೀಷ್ ಉಪನ್ಯಾಸಕರಾದ ಸುಭಕರ್ ಇವರು ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕೈಗಾರಿಕೆಯ ಕಾರ್ಯವಿಧಾನ, ಉತ್ಪಾದನಾ ಕ್ರಮ ಮತ್ತು ನವೀನ ತಂತ್ರಜ್ಞಾನಗಳ ಬಗ್ಗೆ ವಿದ್ಯಾರ್ಥಿಗಳು ನೇರವಾಗಿ ಅವಲೋಕನ ನಡೆಸಿ ಪಾರದರ್ಶಕ ಜ್ಞಾನವನ್ನು ಸಂಪಾದಿಸಿದರು.

ಇಂತಹ ಅಧ್ಯಯನ ಪ್ರವಾಸಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿದ್ದು, ಭವಿಷ್ಯದ ವೃತ್ತಿಜೀವನಕ್ಕೆ ಮಾರ್ಗದರ್ಶಕವಾಗುತ್ತದೆ ಎಂದು ಎಲ್ಲರೂ ಅಭಿಪ್ರಾಯಪಟ್ಟರು .

Related posts

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಲಕ್ಷ್ಮೀ ಪಟಾಕಿ ಅಂಗಡಿಯಲ್ಲಿ ಉತ್ತಮ ರೀತಿಯ ಪಟಾಕಿ ಲಭ್ಯ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya
error: Content is protected !!