July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಇದರ ಜೇಸಿ ಸಪ್ತಾಹದ ಅಂಗವಾಗಿ ಶ್ರೀ ಗಣೇಶ್ ವೈದ್ಯಕೀಯ ಮತ್ತು ಅಪಘಾತ ಚಿಕಿತ್ಸಾ ಕೇಂದ್ರ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಬೆಳ್ತಂಗಡಿಯ ಬಸ್ ನಿಲ್ದಾಣದಲ್ಲಿ ನಡೆಯಿತು.

ತಾಲೂಕಿನ ಹಿರಿಯ ವೈದ್ಯ ಡಾ.ಕೆ ಶ್ರೀನಿವಾಸ್ ಡೊಂಗ್ರೆಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ಸ್ವಾಗತಿಸಿದರು ಗಣೇಶ್ ಕ್ಲಿನಿಕ್ ಇದರ ವೈದ್ಯರು ಸಿಬ್ಬಂದಿಗಳು ಸಾರ್ವಜನಿಕರ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ತಪಾಸಣೆ ಮತ್ತು ಸಲಹೆ ನೀಡಿದರು ಸುಮಾರು ನೂರಕ್ಕೂ ಹೆಚ್ಚು ಸಾರ್ವಜನಿಕರು ರಿಕ್ಷಾ ಚಾಲಕರು ಈ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಸಪ್ತಾಹ ನಿರ್ದೇಶಕ ರಕ್ಷಿತ್ ಅಂಡಿಂಜೆ ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!