ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ.

ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ಸಮಾಜ ಭಾಂದವರಾದ ಎಚ್. ನಾಭಿರಾಜ ಜೈನ್. ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya
error: Content is protected !!