23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಬೆಳ್ತಂಗಡಿ: ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ನಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಸೆ.25 ರಂದು ಭವ್ಯವಾಗಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಗುರುರಾಜ ಪಡ್ವೇತನಯ, ಹಿರಿಯ ಫಾರ್ಮಸಿಸ್ಟ್, ಗುರುದೇವಿ ಮೆಡಿಕಲ್, ಉಜಿರೆ ಅವರು ಆಗಮಿಸಿ, ಫಾರ್ಮಸಿಸ್ಟ್ ವೃತ್ತಿಯ ಮಹತ್ವ ಹಾಗೂ ಆರೋಗ್ಯ ಸೇವೆಯಲ್ಲಿ ಅವರ ಅವಿಭಾಜ್ಯ ಪಾತ್ರವನ್ನು ವಿವರಿಸಿದರು.

ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ. ರೇಷ್ಮಾ ಜಿ ಗೌಡ, ಪ್ರಸನ್ನ ಆಯುರ್ವೇದ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಬಿ.ಕೆ. ಪ್ರಶಾಂತ್, ಹಾಗೂ ಪ್ರಸನ್ನ ಐಟಿಐ ಕಾಲೇಜು ಪ್ರಾಂಶುಪಾಲ ಅಖಿಲೇಶ್ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲರೂ ಒಟ್ಟಾಗಿ ಔಷಧಶಾಸ್ತ್ರಜ್ಞರ ಪ್ರತಿಜ್ಞಾ ವಚನ ಸ್ವೀಕರಿಸಿದರು. ಅತಿಥಿಗಳ ಪ್ರೇರಣಾದಾಯಕ ಭಾಷಣದಿಂದ ವಿದ್ಯಾರ್ಥಿಗಳಲ್ಲಿ ಫಾರ್ಮಸಿ ವೃತ್ತಿಯ ಬಗ್ಗೆ ಅರಿವು ಹಾಗೂ ಹೊಣೆಗಾರಿಕೆಯ ಭಾವನೆ ಇನ್ನಷ್ಟು ಗಾಢವಾಯಿತು.


ಸಮಾರಂಭವನ್ನು ಪ್ರತೀಕ್ಷಾ ನಿರೂಪಿಸಿದರು. ಹಿಲಾನಾ ಸ್ವಾಗತಿಸಿ, ಡಾ. ದೀಕ್ಷಾ ಕೃತಜ್ಞತಾಪೂರ್ವಕ ವಂದನಾ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya
error: Content is protected !!