25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

ಮಿತ್ತಬಾಗಿಲು : ಸುಜ್ಞಾನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮಿತ್ತಬಾಗಿಲು ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.26 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಅಧ್ಯಕ್ಷ ವಿನಾಯಚಂದ್ರ ರವರು ನೆರವೇರಿಸಿ ಶುಭ ಹಾರೈಸಿದರು .ವಲಯ ಮೇಲ್ವಿಚರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ಶ್ರೀಮತಿ ಗೋಪಿ ಕೃಷಿ ಉದ್ಯೋಗ ಸಖಿ ರವರು ವಾರ್ಷಿಕ ವರದಿಯನ್ನು ಮಂಡಿಸಿ, ಹಾಗೂ ಶ್ರೀಮತಿ ಪ್ರತಿಮಾ ಬಿಸಿಸಖಿ ಇವರು ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು. ಸಿಹೆಚ್ ಒ ರವರು ಲಿಂಗತ್ವಧಾರಿತ ದೌರ್ಜನ್ಯದ ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಒಕ್ಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞೆಯನ್ನು ಮಾಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಸಂಜೀವಿನಿ ಸದಸ್ಯರಾದ ಮಲ್ಲಿಕಾ ರವರು ಪ್ರಾರ್ಥಿಸಿ, ಶ್ರೀಮತಿ ವಿನೋದ ಸ್ವಾಗತಿಸಿ, ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ವನಿತಾ ಧನ್ಯವಾದವಿತ್ತರು.

Related posts

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya
error: Content is protected !!