24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

ಮಿತ್ತಬಾಗಿಲು : ಸುಜ್ಞಾನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮಿತ್ತಬಾಗಿಲು ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.26 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಅಧ್ಯಕ್ಷ ವಿನಾಯಚಂದ್ರ ರವರು ನೆರವೇರಿಸಿ ಶುಭ ಹಾರೈಸಿದರು .ವಲಯ ಮೇಲ್ವಿಚರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ಶ್ರೀಮತಿ ಗೋಪಿ ಕೃಷಿ ಉದ್ಯೋಗ ಸಖಿ ರವರು ವಾರ್ಷಿಕ ವರದಿಯನ್ನು ಮಂಡಿಸಿ, ಹಾಗೂ ಶ್ರೀಮತಿ ಪ್ರತಿಮಾ ಬಿಸಿಸಖಿ ಇವರು ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು. ಸಿಹೆಚ್ ಒ ರವರು ಲಿಂಗತ್ವಧಾರಿತ ದೌರ್ಜನ್ಯದ ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಒಕ್ಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞೆಯನ್ನು ಮಾಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಸಂಜೀವಿನಿ ಸದಸ್ಯರಾದ ಮಲ್ಲಿಕಾ ರವರು ಪ್ರಾರ್ಥಿಸಿ, ಶ್ರೀಮತಿ ವಿನೋದ ಸ್ವಾಗತಿಸಿ, ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ವನಿತಾ ಧನ್ಯವಾದವಿತ್ತರು.

Related posts

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
error: Content is protected !!