24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

ಮಿತ್ತಬಾಗಿಲು : ಸುಜ್ಞಾನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮಿತ್ತಬಾಗಿಲು ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.26 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಅಧ್ಯಕ್ಷ ವಿನಾಯಚಂದ್ರ ರವರು ನೆರವೇರಿಸಿ ಶುಭ ಹಾರೈಸಿದರು .ವಲಯ ಮೇಲ್ವಿಚರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ಶ್ರೀಮತಿ ಗೋಪಿ ಕೃಷಿ ಉದ್ಯೋಗ ಸಖಿ ರವರು ವಾರ್ಷಿಕ ವರದಿಯನ್ನು ಮಂಡಿಸಿ, ಹಾಗೂ ಶ್ರೀಮತಿ ಪ್ರತಿಮಾ ಬಿಸಿಸಖಿ ಇವರು ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು. ಸಿಹೆಚ್ ಒ ರವರು ಲಿಂಗತ್ವಧಾರಿತ ದೌರ್ಜನ್ಯದ ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಒಕ್ಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞೆಯನ್ನು ಮಾಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಸಂಜೀವಿನಿ ಸದಸ್ಯರಾದ ಮಲ್ಲಿಕಾ ರವರು ಪ್ರಾರ್ಥಿಸಿ, ಶ್ರೀಮತಿ ವಿನೋದ ಸ್ವಾಗತಿಸಿ, ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ವನಿತಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!