23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ /ಹೆಚ್. ಆರ್. ಡಿ. ಚಟುವಟಿಕೆಗಳನ್ನು ನಡೆಸಲು ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸೆ. 26ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾ‌ರ್, ಜಿ.ಪಂ. ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿಘ್ನಶ್ ರಾಜ್ ಬಿ. ಕೆ., ಗ್ರಾಮೀಣ ಕುಡಿಯುವ ನೀರು ಇಲಾಖೆಯ ಜೆ. ಇ. ಲಕ್ಷ್ಮೀ, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ನಂತರ ಜೆಲಜೀವನ್ ಮಿಷನ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಸುರೇಶ್ ಬಾಳಿಲ, ಅಸ್ಮಿತಾ, ನಾಗಲಿಂಗಯ್ಯ ಸ್ವಾಮಿ, ಶರತ್ ಕುಮಾರ್ ಹಾಜರಿದ್ದು ವಿವಿಧ ತರಬೇತಿ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂದಿದ್ದರು. ಜೆ ಜೆ ಎಂ ತಂಡದ ನಾಯಕ ಮಿಥುನ್ ಕುಮಾರ್, ಸಂಯೋಜಕಿ ಧರ್ಮಶ್ರೀ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು. ಜೆಜೆಎಂ ಸಂಯೋಜಕ ಶಿವರಾಮ ಪಿ. ಬಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!