22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಐಇಸಿ /ಹೆಚ್. ಆರ್. ಡಿ. ಚಟುವಟಿಕೆಗಳನ್ನು ನಡೆಸಲು ಸದಸ್ಯರಿಗೆ ತರಬೇತಿ ಕಾರ್ಯಾಗಾರ ಸೆ. 26ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಉದ್ಘಾಟಿಸಿ ಶುಭ ಹಾರೈಸಿದರು. ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಯಾಮಣಿ, ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾ‌ರ್, ಜಿ.ಪಂ. ಜಲ ಜೀವನ್ ಮಿಷನ್ ಜಿಲ್ಲಾ ಯೋಜನಾ ವ್ಯವಸ್ಥಾಪಕ ವಿಘ್ನಶ್ ರಾಜ್ ಬಿ. ಕೆ., ಗ್ರಾಮೀಣ ಕುಡಿಯುವ ನೀರು ಇಲಾಖೆಯ ಜೆ. ಇ. ಲಕ್ಷ್ಮೀ, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ನಂತರ ಜೆಲಜೀವನ್ ಮಿಷನ್ ಯಶಸ್ವಿ ಕಾರ್ಯಾಚರಣೆ ಬಗ್ಗೆ ಸುರೇಶ್ ಬಾಳಿಲ, ಅಸ್ಮಿತಾ, ನಾಗಲಿಂಗಯ್ಯ ಸ್ವಾಮಿ, ಶರತ್ ಕುಮಾರ್ ಹಾಜರಿದ್ದು ವಿವಿಧ ತರಬೇತಿ ನೀಡಿದರು. ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಕಾರ್ಯಕರ್ತರು ತರಬೇತಿ ಶಿಬಿರದಲ್ಲಿ ಪಾಲ್ಗೊಂದಿದ್ದರು. ಜೆ ಜೆ ಎಂ ತಂಡದ ನಾಯಕ ಮಿಥುನ್ ಕುಮಾರ್, ಸಂಯೋಜಕಿ ಧರ್ಮಶ್ರೀ, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು. ಜೆಜೆಎಂ ಸಂಯೋಜಕ ಶಿವರಾಮ ಪಿ. ಬಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya
error: Content is protected !!