ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ.
ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ಸಮಾಜ ಭಾಂದವರಾದ ಎಚ್. ನಾಭಿರಾಜ ಜೈನ್. ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











