24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ನಿಡ್ಲೆ: ಎಮ್.ಸಿ.ಎಫ್.ಎಲ್ ಮಂಗಳೂರು ವತಿಯಿಂದ ಒದಗಿಸುವ 2 ಕೊಠಡಿಗಳೂ ಸೇರಿದಂತೆ ನಿಡ್ಲೆ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್.ಮೂಲಕ ನಿರ್ಮಾಣವಾಗುವ ನೂತನ ಶಾಲಾ ಕಟ್ಟಡದ “ಶಿಲಾನ್ಯಾಸ”ವನ್ನು ಸೆ.26ರಂದು ನೆರವೇರಿಸಲಾಯಿತು.

ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಶಿಲಾನ್ಯಾಸ ನೆರವೇರಿಸಿ ಶುಭಹಾರೈಸಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯರಾದ ಸತ್ಯನಾರಾಯಣ ರಾವ್ ಪೈರೋಡಿ, ವೇಣೂರು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ, ಎಂಸಿಎಫ್ಎಲ್ ನ ಅಸಿಸ್ಟೆಂಟ್ ಮ್ಯಾನೇಜರ್ ರಾಕೇಶ್, ಸೀನಿಯರ್ ಮ್ಯಾನೇಜರ್ ವಿವೇಕ್ ಕೋಟ್ಯಾನ್, ಕಂಟ್ರಾಕ್ಟರ್ ಸದಾಶಿವ ಸುವರ್ಣ, ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ನೂಜಿಲ ಉಪಸ್ಥಿತರಿದ್ದರು.


ಶಾಲಾ ಮಕ್ಕಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಶಾಂತ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾಜಗುರು ಹೆಬ್ಬಾರ್ ಮಾಡಂಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶರತ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ರೂ. 10,000 ದೇಣಿಗೆ ನೀಡಿದ ಯುವ ಸಮೂಹ ಬೂಡುಜಾಲು ಹಾಗೂ ರೂ. 25,000ನೀಡಿದ ಕಂಟ್ರಾಕ್ಟರ್ ಸದಾಶಿವ ಸುವರ್ಣ ರವರನ್ನು ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಹಳೆ ವಿದ್ಯಾರ್ಥಿಗಳ ಸೇವಾ ಸಂಘದ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಮಕ್ಕಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

Suddi Udaya
error: Content is protected !!