25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ನಿಡ್ಲೆ: ಎಮ್.ಸಿ.ಎಫ್.ಎಲ್ ಮಂಗಳೂರು ವತಿಯಿಂದ ಒದಗಿಸುವ 2 ಕೊಠಡಿಗಳೂ ಸೇರಿದಂತೆ ನಿಡ್ಲೆ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್.ಮೂಲಕ ನಿರ್ಮಾಣವಾಗುವ ನೂತನ ಶಾಲಾ ಕಟ್ಟಡದ “ಶಿಲಾನ್ಯಾಸ”ವನ್ನು ಸೆ.26ರಂದು ನೆರವೇರಿಸಲಾಯಿತು.

ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಶಿಲಾನ್ಯಾಸ ನೆರವೇರಿಸಿ ಶುಭಹಾರೈಸಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯರಾದ ಸತ್ಯನಾರಾಯಣ ರಾವ್ ಪೈರೋಡಿ, ವೇಣೂರು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ, ಎಂಸಿಎಫ್ಎಲ್ ನ ಅಸಿಸ್ಟೆಂಟ್ ಮ್ಯಾನೇಜರ್ ರಾಕೇಶ್, ಸೀನಿಯರ್ ಮ್ಯಾನೇಜರ್ ವಿವೇಕ್ ಕೋಟ್ಯಾನ್, ಕಂಟ್ರಾಕ್ಟರ್ ಸದಾಶಿವ ಸುವರ್ಣ, ಎಸ್ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ನೂಜಿಲ ಉಪಸ್ಥಿತರಿದ್ದರು.


ಶಾಲಾ ಮಕ್ಕಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಶಾಂತ ಸ್ವಾಗತಿಸಿದರು. ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ನ ಅಧ್ಯಕ್ಷ ರಾಜಗುರು ಹೆಬ್ಬಾರ್ ಮಾಡಂಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಶರತ್ ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ರೂ. 10,000 ದೇಣಿಗೆ ನೀಡಿದ ಯುವ ಸಮೂಹ ಬೂಡುಜಾಲು ಹಾಗೂ ರೂ. 25,000ನೀಡಿದ ಕಂಟ್ರಾಕ್ಟರ್ ಸದಾಶಿವ ಸುವರ್ಣ ರವರನ್ನು ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರು, ಹಳೆ ವಿದ್ಯಾರ್ಥಿಗಳ ಸೇವಾ ಸಂಘದ ಸದಸ್ಯರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ಮಕ್ಕಳು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!