September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

ಬೆಳ್ತಂಗಡಿ: ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ನಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಸೆ.25 ರಂದು ಭವ್ಯವಾಗಿ ನೆರವೇರಿತು.

ಮುಖ್ಯ ಅತಿಥಿಗಳಾಗಿ ಶ್ರೀ ಗುರುರಾಜ ಪಡ್ವೇತನಯ, ಹಿರಿಯ ಫಾರ್ಮಸಿಸ್ಟ್, ಗುರುದೇವಿ ಮೆಡಿಕಲ್, ಉಜಿರೆ ಅವರು ಆಗಮಿಸಿ, ಫಾರ್ಮಸಿಸ್ಟ್ ವೃತ್ತಿಯ ಮಹತ್ವ ಹಾಗೂ ಆರೋಗ್ಯ ಸೇವೆಯಲ್ಲಿ ಅವರ ಅವಿಭಾಜ್ಯ ಪಾತ್ರವನ್ನು ವಿವರಿಸಿದರು.

ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್ ಕಾರ್ಯದರ್ಶಿ ಡಾ. ರೇಷ್ಮಾ ಜಿ ಗೌಡ, ಪ್ರಸನ್ನ ಆಯುರ್ವೇದ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಬಿ.ಕೆ. ಪ್ರಶಾಂತ್, ಹಾಗೂ ಪ್ರಸನ್ನ ಐಟಿಐ ಕಾಲೇಜು ಪ್ರಾಂಶುಪಾಲ ಅಖಿಲೇಶ್ ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲರೂ ಒಟ್ಟಾಗಿ ಔಷಧಶಾಸ್ತ್ರಜ್ಞರ ಪ್ರತಿಜ್ಞಾ ವಚನ ಸ್ವೀಕರಿಸಿದರು. ಅತಿಥಿಗಳ ಪ್ರೇರಣಾದಾಯಕ ಭಾಷಣದಿಂದ ವಿದ್ಯಾರ್ಥಿಗಳಲ್ಲಿ ಫಾರ್ಮಸಿ ವೃತ್ತಿಯ ಬಗ್ಗೆ ಅರಿವು ಹಾಗೂ ಹೊಣೆಗಾರಿಕೆಯ ಭಾವನೆ ಇನ್ನಷ್ಟು ಗಾಢವಾಯಿತು.


ಸಮಾರಂಭವನ್ನು ಪ್ರತೀಕ್ಷಾ ನಿರೂಪಿಸಿದರು. ಹಿಲಾನಾ ಸ್ವಾಗತಿಸಿ, ಡಾ. ದೀಕ್ಷಾ ಕೃತಜ್ಞತಾಪೂರ್ವಕ ವಂದನಾ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

Related posts

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya
error: Content is protected !!