July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಪ್ರಮುಖ ನ್ಯಾಯವಾದಿ ಬಿ.ಕೆ ನವೀನ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು, ಇಂಟರ್ನೆಟ್ ಮತ್ತು ಡಿಜಿಟಲ್ ಸಾಧನಗಳನ್ನು ಬಳಸುವಾಗ ನಮ್ಮ ವೈಯುಕ್ತಿಕ ಮಾಹಿತಿ, ಖಾತೆಗಳು, ಸಾಧನೆಗಳ ಗೌಪ್ಯತೆಯನ್ನು ರಕ್ಷಿಸುವ ಕ್ರಮಗಳು ಹಾಗೂ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್ ತಂತ್ರಜ್ಞಾನಗಳನ್ನು ಜಾಗರೂಕತೆಯಿಂದ ಇತರರಿಗೆ ಹಾನಿ ಮಾಡದಂತೆ ಸಮಾಜಕ್ಕೆ ಒಳ್ಳೆಯದನ್ನುಂಟು ಮಾಡುವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುಣ್ಣ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿನಿ ಫಾತಿಮಾ ರಿಧಾ ನಿರೂಪಿಸಿ ಮರಿಟ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya
error: Content is protected !!