25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೆ. 24ರಂದು ಪಿಯುಸಿ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯಲ್ಲಿ ಅನುಸರಿಸಬೇಕಾದ ಜಾಗರೂಕತೆಗಳ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿಯ ಪ್ರಮುಖ ನ್ಯಾಯವಾದಿ ಬಿ.ಕೆ ನವೀನ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದು, ಇಂಟರ್ನೆಟ್ ಮತ್ತು ಡಿಜಿಟಲ್ ಸಾಧನಗಳನ್ನು ಬಳಸುವಾಗ ನಮ್ಮ ವೈಯುಕ್ತಿಕ ಮಾಹಿತಿ, ಖಾತೆಗಳು, ಸಾಧನೆಗಳ ಗೌಪ್ಯತೆಯನ್ನು ರಕ್ಷಿಸುವ ಕ್ರಮಗಳು ಹಾಗೂ ಮೊಬೈಲ್, ಕಂಪ್ಯೂಟರ್, ಇಂಟರ್ನೆಟ್ ತಂತ್ರಜ್ಞಾನಗಳನ್ನು ಜಾಗರೂಕತೆಯಿಂದ ಇತರರಿಗೆ ಹಾನಿ ಮಾಡದಂತೆ ಸಮಾಜಕ್ಕೆ ಒಳ್ಳೆಯದನ್ನುಂಟು ಮಾಡುವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುಣ್ಣ ವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿನಿ ಫಾತಿಮಾ ರಿಧಾ ನಿರೂಪಿಸಿ ಮರಿಟ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya
error: Content is protected !!