26.4 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

ಮಿತ್ತಬಾಗಿಲು : ಸುಜ್ಞಾನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮಿತ್ತಬಾಗಿಲು ಇದರ 2024-2025 ಸಾಲಿನ ವಾರ್ಷಿಕ ಮಹಾಸಭೆಯನ್ನು ಸೆ.26 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ಕೆ.ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಅಧ್ಯಕ್ಷ ವಿನಾಯಚಂದ್ರ ರವರು ನೆರವೇರಿಸಿ ಶುಭ ಹಾರೈಸಿದರು .ವಲಯ ಮೇಲ್ವಿಚರಕರಾದ ಜಯಾನಂದ್ ಸಂಜೀವಿನಿ ಯೋಜನೆಯ ದ್ಯೆಯೋದ್ದೇಶ ಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಸದಸ್ಯರಿಗೆ ಮನಮುಟ್ಟುವಂತೆ ನೀಡಿದರು. ಶ್ರೀಮತಿ ಗೋಪಿ ಕೃಷಿ ಉದ್ಯೋಗ ಸಖಿ ರವರು ವಾರ್ಷಿಕ ವರದಿಯನ್ನು ಮಂಡಿಸಿ, ಹಾಗೂ ಶ್ರೀಮತಿ ಪ್ರತಿಮಾ ಬಿಸಿಸಖಿ ಇವರು ಶಾಸನಬದ್ಧ ಲೆಕ್ಕಪರಿಶೋಧನವರದಿಯನ್ನು ಮಂಡಿಸಿದರು. ಸಿಹೆಚ್ ಒ ರವರು ಲಿಂಗತ್ವಧಾರಿತ ದೌರ್ಜನ್ಯದ ಮತ್ತು ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಒಕ್ಕೂಟದ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮಾದಕ ಮುಕ್ತ ಕರ್ನಾಟಕ ಪ್ರತಿಜ್ಞೆಯನ್ನು ಮಾಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವತ್ಸಲಾ ರವರು ಸಂಜೀವಿನಿ ಯೋಜನೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಸಂಜೀವಿನಿ ಸದಸ್ಯರಾದ ಮಲ್ಲಿಕಾ ರವರು ಪ್ರಾರ್ಥಿಸಿ, ಶ್ರೀಮತಿ ವಿನೋದ ಸ್ವಾಗತಿಸಿ, ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ವನಿತಾ ಧನ್ಯವಾದವಿತ್ತರು.

Related posts

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಬೆಳ್ತಂಗಡಿ ಪ.ಪಂ. ನಾಮ ನಿರ್ದೇಶಿತ ಸದಸ್ಯರಾಗಿ ಹೆನ್ರಿ ಲೋಬೊ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಹುಲಿ ವೇಷ ಪ್ರದರ್ಶನ

Suddi Udaya
error: Content is protected !!