July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರವನ್ನು ಸೆ. 24ರಂದು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಎಕ್ಸೆಲ್ ಪಿಯು ಕಾಲೇಜಿನ ಉಪನ್ಯಾಸಕ ಸಿಎ ಕೊರ್ಸಿನ ಸಂಯೋಜಕ ಅರುಣ್‌ ಕ್ಯಾಸ್ತೆಲಿನೊರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಸಿಎ ಫೌಂಡೇಶನ್ ಕೋರ್ಸ್ ನ ಪಠ್ಯಕ್ರಮ, ಅರ್ಹತೆ,ಪರೀಕ್ಷೆಯ ರಚನೆ, ವಿಧಾನ ಅದರ ಪ್ರಾಮುಖ್ಯತೆ ಹಾಗೂ ಸಿಪಿಟಿ ಪರೀಕ್ಷೆಯ ಅರ್ಹತೆ ಪರೀಕ್ಷೆ, ವಿಧಾನ, ಅಂಕಗಳು ಪರೀಕ್ಷೆಯ ವಿಷಯಗಳ ಕುರಿತು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೆರೇಸಾ ಪ. ಪೂರ್ವ ಕಾಲೇಜಿನ ಪ್ರಾಂಶುಪಾಲೆ ಭಗಿನಿ ಮೋಲಿ ಡಿಕುನ್ನ ರವರು ವಹಿಸಿದ್ದರು. ಉಪನ್ಯಾಸಕ ಲೋಕೇಶ್ ಕಾರ್ಯಕ್ರಮ ನಿರೂಪಿಸಿ, ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿನಿ ರೀಶಲ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya
error: Content is protected !!