July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

ತೋಟತ್ತಾಡಿ : ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಆಶ್ರಯದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಸೆ.29 ರಂದು ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಎಸ್.ಎನ್.ಡಿ.ಪಿ ಶಾಖೆ, ಬೆಂದ್ರಾಳ ತೋಟತ್ತಾಡಿಯಲ್ಲಿ, ನಡೆಯಲಿದೆ.

ಬೆಳಿಗ್ಗೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಉಜಿರೆ ಇವರ ಪೌರೋಹಿತ್ಯದಲ್ಲಿ,”ಗಣಹೋಮ ಹಾಗೂ ಶ್ರೀ ಶಾರದಾ ದೇವಿಯ ಮೂರ್ತಿ ಪ್ರತಿಷ್ಠೆ”.ನಂತರ ಆಹ್ವಾನಿತ ವಿವಿಧ ಭಜನಾ ತಂಡಗಳಿಂದ ಭಜನೆ, ಧಾರ್ಮಿಕ ಸಭಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಕ್ಸೆಲ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ| ಪ್ರಜ್ವಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡರು ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ವಂದನಾ ಎಂ ಇರ್ವತ್ರಾಯ, ಚಾರ್ಮಾಡಿ ಗ್ರಾಂ ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ಎ, ನಾರಾಯಣ ಗುರು ಎಸ್.ಎನ್.ಡಿ.ಪಿ ಸಂಘದ ಅಧ್ಯಕ್ಷ ಸುರೇಶ್ ಎಂ ಎನ್, ಭಾಗವಹಿಸಲಿದ್ದು, ಧರ್ಮರಕ್ಷಾ ವೇದಿಕೆ, ತೋಟತ್ತಾಡಿ ಇದರ ಅಧ್ಯಕ್ಷರಾದ ಶ್ರೀ ಶಿವಪ್ರಸಾದ್ ಮಡಿಯೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ, ಮಧ್ಯಾಹ್ನ “ಮಹಾಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ”, ಮಧ್ಯಾಹ್ನ ವಿವಿಧ ಆಹ್ವಾನಿತ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ ಮಹಾಪೂಜೆ ನಂತರ ಶ್ರೀ ಶಾರದಾ ದೇವಿ ಮೂರ್ತಿಯ ವೈಭವಯುತ ಶೋಭಾಯಾತ್ರೆ ನಡೆಯಲಿದೆ.

Related posts

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!