23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

ಉಜಿರೆ: ಭಾರತದ ಜ್ಞಾನ ಸಂಪತ್ತು ವಿಶಿಷ್ಟವಾದದ್ದು. ಇದನ್ನು ಅರಿತು ನಾವೆಲ್ಲರೂ ಜ್ಞಾನಿಗಳಾಗೋಣ ಎಂದು ಎಸ್.ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹೇಳಿದರು.

ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ ” ಗಣಿತ ಸಂಸ್ಕೃತ ಸಂಗಮ ” ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಜ್ಞಾನ ಪರಂಪರೆ ತನ್ನ ಆದಿಯಿಂದಲೂ ಜಗತ್ತಿನ ಏಳಿಗೆಗೆ ವಿಶಿಷ್ಠ ವಾದ ಮೌಲ್ಯಯುತ ಸಂಪತ್ತ್ತನ್ನು ನೀಡುತ್ತಾ ಬಂದಿದೆ. ಇದನ್ನು ಕಂಡ ವಿವಿಧ ದೇಶಗಳು ಭಾರತದ ಮೇಲೆ ದಾಳಿಮಾಡುತ್ತಾ ತಮ್ಮ ಪಾಶ್ಚಾತ್ಯ ಸಂಸ್ಕೃತಿಯನ್ನು ಸ್ಥಾಪಿಸಿದ್ದಾರೆ ಎಂದರು.

ಶಾಸ್ತ್ರಗಳ ನಡುವೆ ಸೇತುವೆ ನಿರ್ಮಾಣದ ಅಗತ್ಯವಿದೆ. ಈ ಅಗತ್ಯವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಪೂರೈಸಿದೆ.
ಇದ್ಕಕೆ ಅನುಗುಣವಾಗಿ ಇಂದಿನ ಈ ಕಾರ್ಯಾಗಾರ ಉಪಯುಕ್ತವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಮಾತನಾಡಿ ‘ಐ ಕೆ ಎಸ್ ಶಿಕ್ಷಣ ರೀತಿ ತಿಳಿಯುವುದರಿಂದ ದೇಶಕ್ಕೆ ಜನರಿಗೆ ಉಪಯೋಗವಾಗಲಿದೆ. ನಾವು ಕಾಣುವ ಪ್ರತಿ ವಿಷಯದಲ್ಲೂ ಭಾರತೀಯ ಜ್ಞಾನ ಪರಂಪರೆ ಅಡಗಿದೆ. ಇದನ್ನು ನಾವು ಗ್ರಹಿಸೋಣ ಎಂದು ಅಧ್ಯಕ್ಷೀಯ ನುಡಿಗಳನ್ನು ಹೇಳಿದರು.

ಕಾರ್ಯಕ್ರಮದಲ್ಲಿ ಇರ್ವರು ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಶ್ರೀಪತಿ ಕಲ್ಲೂರಾಯ ( ಅಧ್ಯಕ್ಷರು ವಿವೇಕಾನಂದ ಕಾಲೇಜು ಪುತ್ತೂರು ) ಮತ್ತು ಡಾ. ಸುರೇಶ್ ಬಾಬು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಸಿಬಿಐಟಿ ಹೈದ್ರಾಬಾದ್ ಇವರಿಗೆ ಗೌರವಿಸಲಾಯಿತು.

ಕಾಲೇಜಿನ ಆಡಳಿತ ಕುಲಸಚಿವ ಡಾ. ಶ್ರೀಧರ್ ಎನ್ ಭಟ್ ಸ್ವಾಗತಿಸಿ, ಗಣಿತ ವಿಭಾಗದ ಮುಖ್ಯಸ್ಥ ಬಿ ಗಣೇಶ್ ನಾಯಕ್ ವಂದಿಸಿದರು.

Related posts

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!